TSK

TSK · ರೋಮಾಪುರದವರಿಗೆ 5:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

‹ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು”› ಎಂದು ಹೇಳಿದನು.

‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›

‹ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.›

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›