ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ರೋಮಾಪುರದವರಿಗೆ 5:17
Treasury of Scripture Knowledge references in ಕನ್ನಡ IRV.
‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›
¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.