ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
TSK
TSK · ರೋಮಾಪುರದವರಿಗೆ 7:14
Treasury of Scripture Knowledge references in ಕನ್ನಡ IRV.
ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
ಆತನು ತಿರುಗಿಕೊಂಡು ಪೇತ್ರನಿಗೆ, ‹“ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ”› ಎಂದು ಹೇಳಿದನು.
ಯೇಸು ಅವನಿಗೆ, ‹“‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’›
ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
¶ ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.