¶ ‹“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.›
TSK
TSK · ರೋಮಾಪುರದವರಿಗೆ 7:9
Treasury of Scripture Knowledge references in ಕನ್ನಡ IRV.
ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
¶ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.