‹ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.›
TSK
TSK · ರೋಮಾಪುರದವರಿಗೆ 8:1
Treasury of Scripture Knowledge references in ಕನ್ನಡ IRV.
‹ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.›
“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
¶ ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.