TSK

TSK · ರೋಮಾಪುರದವರಿಗೆ 8:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.

“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.

‹“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ”› ಎಂದನು.

ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

‹“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ”› ಪ್ರಾರ್ಥಿಸಿದನು.

ಯೇಸು ಆಕೆಗೆ, ‹“ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು”› ಎಂದನು.

ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.

ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.

¶ ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.

ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.

ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.