ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
TSK
TSK · ರೋಮಾಪುರದವರಿಗೆ 8:24
Treasury of Scripture Knowledge references in ಕನ್ನಡ IRV.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.
ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.