ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.
TSK
TSK · ರೋಮಾಪುರದವರಿಗೆ 8:25
Treasury of Scripture Knowledge references in ಕನ್ನಡ IRV.
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
‹ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.›
ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.