ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
TSK
TSK · ರೋಮಾಪುರದವರಿಗೆ 8:3
Treasury of Scripture Knowledge references in ಕನ್ನಡ IRV.
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
¶ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
¶ ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.