TSK

TSK · ರೋಮಾಪುರದವರಿಗೆ 9:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.

“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.

¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›

‹ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ”› ಎಂದನು.

¶ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.

ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.