ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
TSK
TSK · ರೋಮಾಪುರದವರಿಗೆ 9:17
Treasury of Scripture Knowledge references in ಕನ್ನಡ IRV.
ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.
ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.
ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.
‹ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,›‹ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”› ಎಂದನು.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.