ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
TSK
TSK · ರೋಮಾಪುರದವರಿಗೆ 9:18
Treasury of Scripture Knowledge references in ಕನ್ನಡ IRV.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.