ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?
TSK
TSK · ರೋಮಾಪುರದವರಿಗೆ 9:20
Treasury of Scripture Knowledge references in ಕನ್ನಡ IRV.
ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?
“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.
ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?
ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?