ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
TSK
TSK · ರೋಮಾಪುರದವರಿಗೆ 9:22
Treasury of Scripture Knowledge references in ಕನ್ನಡ IRV.
‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
‹ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.›
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
¶ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.