TSK

TSK · ರೋಮಾಪುರದವರಿಗೆ 9:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.

ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.

ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.