TSK

TSK · ರೋಮಾಪುರದವರಿಗೆ 9:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.

¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.

¶ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು