TSK

TSK · ತೀತನಿಗೆ 1:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!

ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.

ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.

ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.

ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.