TSK

TSK · ತೀತನಿಗೆ 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.

¶ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”

ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,

ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.

ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.

ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.