ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.
TSK
TSK · ತೀತನಿಗೆ 2:14
Treasury of Scripture Knowledge references in ಕನ್ನಡ IRV.
ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.
¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
¶ ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.