ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
TSK
TSK · ತೀತನಿಗೆ 3:14
Treasury of Scripture Knowledge references in ಕನ್ನಡ IRV.
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, ‹“ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ”› ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
‹ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.›
ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.