ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
TSK
TSK · ತೀತನಿಗೆ 3:5
Treasury of Scripture Knowledge references in ಕನ್ನಡ IRV.
ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.