ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
TSK
TSK · ತೀತನಿಗೆ 3:6
Treasury of Scripture Knowledge references in ಕನ್ನಡ IRV.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
‹ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.›
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.