“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.
TSK
TSK · ತೀತನಿಗೆ 3:8
Treasury of Scripture Knowledge references in ಕನ್ನಡ IRV.
ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
¶ ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
¶ “ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.
ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.