ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
TSK
TSK · ಜೆಕರ್ಯ 10:3
Treasury of Scripture Knowledge references in ಕನ್ನಡ IRV.
ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.
ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
¶ “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
¶ “‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,
“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”
¶ “‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.
ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”
“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;