ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
TSK
TSK · ಜೆಕರ್ಯ 12:4
Treasury of Scripture Knowledge references in ಕನ್ನಡ IRV.
¶ ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.
¶ “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.