ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
TSK
TSK · ಜೆಕರ್ಯ 13:2
Treasury of Scripture Knowledge references in ಕನ್ನಡ IRV.
ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.
ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”
¶ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.
ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
‹ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.›
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
¶ ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.