TSK

TSK · ಜೆಕರ್ಯ 13:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.

ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.

ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.

ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.

ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

¶ ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.

ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.

ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.

ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.