ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
TSK
TSK · ಜೆಕರ್ಯ 14:2
Treasury of Scripture Knowledge references in ಕನ್ನಡ IRV.
ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
¶ “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.
¶ “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›
‹ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.›
‹ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.›
‹ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು”› ಅಂದನು.
¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.