TSK

TSK · ಜೆಕರ್ಯ 14:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.

¶ ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.

ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.

ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.

ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.

“ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,

ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.

“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.

ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.