TSK

TSK · ಜೆಕರ್ಯ 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

¶ ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.

ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.

“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

‹ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.›

¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.