TSK

TSK · ಜೆಕರ್ಯ 2:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.

ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.

ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.

¶ ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.

ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.

ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”

‹ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.›