TSK

TSK · ಜೆಕರ್ಯ 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.

¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.

ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

¶ ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?

ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.

ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

¶ ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.