ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
TSK
TSK · ಜೆಕರ್ಯ 4:14
Treasury of Scripture Knowledge references in ಕನ್ನಡ IRV.
¶ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
¶ “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.
ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.