ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
TSK
TSK · ಜೆಕರ್ಯ 4:6
Treasury of Scripture Knowledge references in ಕನ್ನಡ IRV.
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.
‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.