TSK

TSK · ಜೆಕರ್ಯ 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.

ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.

ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, ‹“ತಂದೆಯೇ,›‹ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.›

¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.

ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.