TSK

TSK · ಜೆಕರ್ಯ 6:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.

ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.

ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.

ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”

ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.

¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.