ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
TSK
TSK · ಜೆಕರ್ಯ 6:8
Treasury of Scripture Knowledge references in ಕನ್ನಡ IRV.
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.