ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
TSK
TSK · ಜೆಕರ್ಯ 7:3
Treasury of Scripture Knowledge references in ಕನ್ನಡ IRV.
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
¶ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.