ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
TSK
TSK · ಜೆಕರ್ಯ 8:22
Treasury of Scripture Knowledge references in ಕನ್ನಡ IRV.
ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”