“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
TSK
TSK · ಜೆಕರ್ಯ 8:3
Treasury of Scripture Knowledge references in ಕನ್ನಡ IRV.
ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
¶ ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.
ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›
ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.