TSK

TSK · ಜೆಕರ್ಯ 9:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.

ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.

ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.

ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.

ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.

ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.

ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

¶ ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.

ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

¶ ‹“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,›‹ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,›

ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.