ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
TSK
TSK · ಜೆಕರ್ಯ 9:2
Treasury of Scripture Knowledge references in ಕನ್ನಡ IRV.
ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
¶ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”