¶ ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:
TSK
TSK · ಜೆಕರ್ಯ 9:5
Treasury of Scripture Knowledge references in ಕನ್ನಡ IRV.
¶ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
¶ ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
¶ ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
¶ “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.