¶ ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
TSK
TSK · ಜೆಕರ್ಯ 9:8
Treasury of Scripture Knowledge references in ಕನ್ನಡ IRV.
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
¶ ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.
¶ “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.
ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
¶ ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.