ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
TSK
TSK · 2 ಪೂರ್ವಕಾಲವೃತ್ತಾ 21:10
Treasury of Scripture Knowledge references in Kannada KJV.
ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.