ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
TSK
TSK · 2 ಪೂರ್ವಕಾಲವೃತ್ತಾ 21:2
Treasury of Scripture Knowledge references in Kannada KJV.
ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.