TSK

TSK · 2 ಪೂರ್ವಕಾಲವೃತ್ತಾ 21:20

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.

ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.

ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?