TSK

TSK · 2 ಪೂರ್ವಕಾಲವೃತ್ತಾ 30:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.

ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.

ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.

ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.

ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.

ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.

ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.

ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.