ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
TSK
TSK · 2 ಪೇತ್ರನು 1:21
Treasury of Scripture Knowledge references in Kannada KJV.
ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.