TSK

TSK · ಅಪೊಸ್ತಲರ ಕೃತ್ಯಗ 11:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.

ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.

ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.

ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.